BJP ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿಸೂರ್ಯ; ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ನೇಮಕ!

ಬಿಜೆಪಿ ರಾಷ್ಟ್ರೀಯ ನಾಯಕತ್ವದಲ್ಲಿ ಕೆಲವು ಬದಲಾವಣೆಗಳು ಜರುಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರನ್ನು ನೇಮಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಪಕ್ಷದ ಹೊಸ ಪದಾಧಿಕಾರಗಳ ನೇಮಕಾತಿ ಮಾಡಲಾಗಿದೆ. ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದು. ಪಕ್ಷದ ಹಿರಿಯ ನಾಯಕ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮ್ ಮಾಧವ್, ಪಿ ಮುರಳಿಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಜಾಗಕ್ಕೆ ಹೊಸಬರ ನೇಮಕವಾಗಿದೆ.

Image

ಪಕ್ಷದ ರಾಷ್ಟ್ರೀಯ ವಕ್ತಾರ ಹುದ್ದೆ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಅನಿಲ್ ಬಲೂಲಿ ಅವರನ್ನು ಮಾಧ್ಯಮ ಉಸ್ತುವಾರಿ ಸ್ಥಾನದಿಂದ ಮುಖ್ಯ ವಕ್ತಾರನ್ನಾಗಿ ನೇಮಿಸಲಾಗಿದೆ.

ಕರ್ನಾಟಕದ ನಾಯಕರು ಸೇರಿದಂತೆ ನೆರೆಯ ಮಹಾರಾಷ್ಟ್ರ ಪ್ರಮುಖ ನಾಯಕರಾದ ವಿನೋದ್ ತವಾಡೆ, ಪಂಕಜಾ ಮುಂಡೆ, ಉತ್ತರ ಪ್ರದೇಶದ ವಿನೋದ್ ಸೋಂಕರ್ ರಾಷ್ಟ್ರೀಯ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕೇಂದ್ರದ ಮಾಜಿ ಸಚಿವ ಗೋಪಿನಾಥ್ ಮುಂಡೆ ಮಗಳು ಪಂಕಜಾ ಮುಂಡೆಯನ್ನು ರಾಷ್ಟ್ರೀಯ ಕಾರ್ಯದರ್ಶಿಯಾಗಿ, ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆಯನ್ನು ಪಕ್ಷದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.


ಇದನ್ನೂ ಓದಿ: ರೈತರ ಪ್ರತಿಭಟನೆಯ ಮಧ್ಯೆ ಪಂಜಾಬ್‌ ಹರಿಯಾಣದಲ್ಲಿ ತಕ್ಷಣ ಅಕ್ಕಿ ಖರೀದಿಸಲು ಕೇಂದ್ರ ಆದೇಶ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights