ಅಕ್ಕಿ ಕೇಳಿದ ರೈತನಿಗೆ ಸಾಯಿ ಎಂದು ಹೇಳಿದ್ದು ಉಮೇಶ್‌ ಕತ್ತಿಯವರು ಮಾನಸಿಕ ವಿಕೃತಿ: ಹೆಚ್‌ಡಿಕೆ ಆಕ್ರೋಶ

ಪಡಿತರ ಅಕ್ಕಿಗಾಗಿ ಕರೆ ಮಾಡಿದ ರೈತರಿಗೆ ಸಚಿವ ಉಮೇಶ್‌ ಕತ್ತಿ, ನೀವು ಸಾಯುವುದೇ ಒಳ್ಳೆಯದು ಎಂದು ಹೇಳಿರುವುದು ಅವರ ಮಾನಸಿಕ ವಿಕೃತಿ ಎಂದು ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ. ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ ಎಂದು ಕಿಡಿ ಕಾರಿದ್ದಾರೆ.

ಇದನ್ನು ತೀವ್ರವಾಗಿ ಖಂಡಿಸುವೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights