ಖಾತೆ ಕ್ಯಾತೆ; ಶಾಸಕ ಸ್ಥಾನಕ್ಕೂ ಸಚಿವ ಆನಂದ್ ಸಿಂಗ್ ರಾಜೀನಾಮೆ?

ಸಚಿವ ಸಂಪುಟ ರಚನೆಯಾದ ಬಳಿಕ, ಖಾತೆ ಕ್ಯಾತೆ ಸದ್ದು ಮಾಡುತ್ತಿದೆ. ತಮಗೆ ನೀಡಿರುವ ಖಾತೆಗಳ ಬಗ್ಗೆ ಅಸಮಧಾನಗೊಂಡಿರುವ ಸಚಿವರು, ಖಾತೆಯನ್ನು ಬದಲಿಸುವಂತೆ ಒತ್ತಾಯ ಹೇರುತ್ತಿದ್ದಾರೆ. ಈ ನಡುವೆ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡುವ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ.

ಖಾತೆ ಬದಲಾವಣೆ ಆಗದಿದ್ದಲ್ಲ ಅವರು ಸಚಿವ ಸ್ಥಾನಕ್ಕೆ ಮಾತ್ರವಲ್ಲದೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಇದು ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಆನಂದ್ ಸಿಂಗ್ ಇದುವರೆಗೂ ವಿಧಾನಸಭೆಗೆ ಕಾಲಿಟ್ಟಿಲ್ಲ. ಅಲ್ಲದೇ, ವಿಜಯನಗರದಲ್ಲಿರವ ಅವರ ಶಾಸಕರ ಕಚೇರಿಯನ್ನು ಖಾಲಿ ಮಾಡಿದ್ದು, ನಿನ್ನೆ ಶಾಸಕರ ಕಚೇರಿ ಎಂಬ ಬೋರ್ಡನ್ನು ಕ್ರೇನ್ ಮೂಲಕ ತೆರವುಗೊಳಸಲಾಗಿದೆ. ಮಾತ್ರವಲ್ಲ ಇಲ್ಲಿ ಶಾಸಕರು ಲಭ್ಯವಿಲ್ಲ ಎಂದು ಬೋರ್ಡ್‌ ಸಹ ಹಾಕಲಾಗಿದೆ.

ಭಾನುವಾರ ಆನಂದ್ ಸಿಂಗ್ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಖಾತೆ ಬದಲಾವಣೆ ಬಗ್ಗೆ ಕೇಳಿದ್ದರು. ಆದರೆ, ಸದ್ಯಕ್ಕೆ ಆಗೋಲ್ಲ. ಈಗ ನಿಮ್ಮ ಖಾತೆ ಬದಲಿಸಿದರೆ, ಉಳಿದವರೂ ಖಾತೆ ಬದಲಾವಣೆ ಮಾಡುವಂತೆ ಒತ್ತಡ ಹಾಕುತ್ತಾರೆ. ಹಾಗಾಗಿ, ಬದಲಾವಣೆ ಸಾಧ್ಯವಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದರು ಎನ್ನಲಾಗಿದೆ.
ಬೊಮ್ಮಾಯಿ ಅವರ ಮಾತಿನಿಂದ ಬೇಸರಗೊಂಡಿರುವ ಆನಂದ್ ಸಿಂಗ್ ರಾಜೀನಾಮೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಖಾತೆ ಹಂಚಿಕೆಯಾದ ಸಂದರ್ಭದಲ್ಲಿ ಮಾತನಾಡಿದ್ದ ಆನಂದ್ ಸಿಂಗ್, ಪ್ರವಾಸೋದ್ಯಮ ನನಗೆ ಬೇಡ. ಬೇರೆ ಖಾತೆ ಕೊಡಿ. ಇಲ್ಲ ಅಂದ್ರೆ ಶಾಸಕನಾಗಿಯೇ ಉಳಿಯುತ್ತೇನೆ ಎಂದು ಹೇಳಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights