ದೇಶವನ್ನು ತಾರತಮ್ಯ ಮುಕ್ತಗೊಳಿಸುವುದೇ ಅಂಬೇಡ್ಕರ್‌ಗೆ ಸಲ್ಲಿಸುವ ಗೌರವ: ರಾಹುಲ್‌ಗಾಂಧಿ

ದೇಶವನ್ನು ತಾರತಮ್ಯ ಮುಕ್ತಗೊಳಿಸುವುದು, ಅದಕ್ಕಾಗಿ ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಹಣಾ ದಿನದ ಅಂಗವಾಗಿ ಅಂಬೇಡ್ಕರ್‌ ಅವರಿಗೆ ಟ್ವೀಟ್ ಮೂಲಕ ಗೌರವ ಸಲ್ಲಿಸಿರುವ ರಾಹುಲ್ ಗಾಂಧಿ, ರಾಷ್ಟ್ರ ನಿರ್ಮಾಣಕ್ಕೆ ಡಾ. ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಭಾರತವನ್ನು ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಲು ಕೆಲಸ ಮಾಡುವುದೇ ಅವರಿಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದಿದ್ದಾರೆ.

ದೇಶದ ಮೊದಲ ಕಾನೂನು ಸಚಿವರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ 1956ರಲ್ಲಿ ಮಹಾ ಪರಿನಿರ್ವಹಣಾರಾಗಿದ್ದರು. ಈ ದಿನವನ್ನು ಮಹಾ ಪರಿನಿರ್ವಾಹಣಾ ದಿನವಾಗಿ ಆಚರಿಸಲಾಗುತ್ತಿದೆ.


ಇದನ್ನೂ ಓದಿ: ಪರಿಷತ್ ಚುನಾವಣೆ: ಮೋದಿ ಕ್ಷೇತ್ರದಲ್ಲಿ BJPಗೆ ಹೀನಾಯ ಸೋಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights