ಪ.ಬಂಗಾಳದಲ್ಲಿ ಮಂಜಿನಿಂದಾಗಿ ರಸ್ತೆ ಅಪಘಾತ : 13 ಮಂದಿ ಸಾವು – 18 ಜನರಿಗೆ ಗಾಯ!

ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಅಧಿಕ ಮಂಜಿನಿಂದಾಗಿ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು 18 ಮಂದಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿದ್ದರಿಂದ 13 ಜನರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚುರಭಂದರ್ ಲಾಲ್ ಶಾಲೆಯಿಂದ ಧುಪ್ಗುರಿಗೆ ವಿವಾಹದ ಅತಿಥಿಗಳನ್ನು ಹೊತ್ತು ಸಾಗಿಸುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯ ಜಲ್ಧಾಕಾ ಸೇತುವೆ ಬಳಿ ಅಪಘಾತಕ್ಕೀಡಾಗಿ ಇಬ್ಬರು ಪುರುಷರು, ಆರು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಜಲ್ಪೈಗುರಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಗಾಯಗೊಂಡ 18 ಜನರಲ್ಲಿ ನಾಲ್ವರನ್ನು ಜಲ್ಪೈಗುರಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಗೆ, ಮೂವರನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜಿಗೆ, ಒಬ್ಬ ವ್ಯಕ್ತಿಯನ್ನು ಜಲ್ಪೈಗುರಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಾಣಿಜ್ಯ ವಾಹನ ಟಾಟಾ ಮ್ಯಾಜಿಕ್, ಮಾರುತಿ ವ್ಯಾನ್ ಮತ್ತು ಕಾರು ಧುಪ್ಗುರಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಮಂಜಿನಿಂದ ಗೋಚರತೆ ಕಡಿಮೆಯಾದ ಕಾರಣ ಮೊದಲ ವಾಹನ ಇದ್ದಕ್ಕಿದ್ದಂತೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಮಿನಿವ್ಯಾನ್ ಮತ್ತು ಎದುರು ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights