Supreme Ayodhya Verdict Published : ವಿವಾದಿತ ಜಮೀನು ರಾಮಲಲ್ಲಾ ಪಾಲು : ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ವಿವಾದಿತ ರಾಮಜನ್ಮಭೂಮಿ ಪ್ರಕರಣದ ವಿವಾದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ಪ್ರಕಟ ಮಾಡಿದೆ.

ಹೌದು..  ಎಲ್ಲಾ ಧರ್ಮವನ್ನೂ ಗೌರವಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್​ನ ಸಾಂವಿಧಾನಿಕ ಪೀಠ, ಕೇವಲ ನಂಬಿಕೆಗಳಿಂದ ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಜತೆಗೆ ಹಿಂದೂಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅಯೋಧ್ಯೆಯಲ್ಲಿ ಜಾಗವನ್ನು ನೀಡಿ ಸುಪ್ರೀಂ ಕೋರ್ಟ್​ ಆದೇಶಿಸಿದೆ.  ಇನ್ನು ಮುಸ್ಲಿಂ ಸಮುದಾಯಕ್ಕೆ ಬದಲಿ ಜಾಗವನ್ನು ನೀಡಲು ಸಹ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಈ ಮೂಲಕ ಅತಿ ಹಳೆಯ ವಿವಾದಕ್ಕೆ ತೆರೆ ಎಳೆದಿದೆ.

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಇದ್ದ ಜಾಗದ 2.77 ಎಕರೆ ವಿವಾದಿತ ಭೂಮಿ ಯಾರಿಗೆ ಸೇರಿದ್ದು ಎಂಬುದೇ ಈಗ ಈ ಪ್ರಕರಣದ ವಸ್ತುವಾಗಿದೆ. 1528 ಶ್ರೀರಾಮ ಹುಟ್ಟಿದ ಸ್ಥಳ ಎಂದು ನಂಬಲಾಗುವ ಅಯೋಧ್ಯೆಯಲ್ಲಿ ಬಾಬರ್‌ ಮಸೀದಿ ನಿರ್ಮಾಣ ಮಾಡಿದ್ದ. ರಾಮ ಮಂದಿರ ಕೆಡವಿ ದೇವಾಲಯ ನಿರ್ಮಿಸಲಾಗಿದೆ ಎಂಬುದು ಆರೋಪ.

ಇದು ಸುಳ್ಳು. ಬಾಬ್ರಿ ಮಸೀದಿ ಜಾಗ ತಮಗೆ ಸೇರಿದ್ದು ಎಂಬುದು ಸುನ್ನಿ ವಕ್ಫ್ ಮಂಡಳಿಯ ವಾದ. ಹಾಗೆಯೇ ನಿರ್ಮೋಹಿ ಅಖಾಡ ಕೂಡ ಇದು ತನಗೆ ಸೇರಿದ್ದೆಂದು ಹೇಳುತ್ತಿದೆ. 2010ರಲ್ಲಿ ಅಲಾಹಾಬಾದ್ ಉಚ್ಚ ನ್ಯಾಯಾಲಯವು ಈ ಮೂರೂ ಗುಂಪುಗಳಿಗೆ ವಿವಾದಿತ ಭೂಮಿಯನ್ನು ಸಮಾನವಾಗಿ ಹಂಚುವ ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಹಲವು ಮೇಲ್ಮನವಿಗಳು ದಾಖಲಾದವು. ಈಗ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇದರ ವಿಚಾರಣೆ ನಡೆಸಿ, ತೀರ್ಪು ನೀಡಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights